೪.‘ದೀಪ’




ಬೇಂದ್ರೆಯವರಿಗೆ ಪ್ರಣಯವು ಒಂದು ವೈಯಕ್ತಿಕ ಕಾಮನೆಯಲ್ಲ. ಇದೊಂದು ವಿಶ್ವಲೀಲೆ. ಅವರ ಅನೇಕ ಪ್ರಣಯಗೀತೆಗಳು ವಿಶ್ವಪ್ರಣಯವನ್ನು ತೋರಿಸುವ ಗೀತೆಗಳೇ ಆಗಿವೆ. ಅವರ ಸುಪ್ರಸಿದ್ಧ ಗೀತೆಯಾದ ‘ಅನಂತ ಪ್ರಣಯ’ವು (‘ಉತ್ತರ ಧ್ರುವದಿಂ ದಕ್ಷಿಣ ಧ್ರುವಕೂ ಚುಂಬಕ ಗಾಳಿಯು ಬೀಸುತಿದೆ….’) ವಿಶ್ವದ ಅಂತರಂಗದಲ್ಲಿ ಚಿಮ್ಮುತ್ತಿರುವ ಪ್ರಣಯವನ್ನು ತೋರಿಸುತ್ತದೆ. ಅವರ ‘ಕಾಮಕಸ್ತೂರಿ’ ಕವನಸಂಕಲನದಲ್ಲಿ ಇರುವ ‘ನನ್ನವಳು’ ಕವನವಂತೂ ಸಮಗ್ರ ಜಗತ್ತಿನ ಶ್ರೇಷ್ಠ ಪ್ರಣಯಕವನಗಳಲ್ಲಿ ಒಂದಾಗಿದೆ. ಈ ಕವನದಲ್ಲಿ ನಿಸರ್ಗದ ದೈನಂದಿನ ಬದಲಾವಣೆಗಳಾದ ಹಗಲು,ಸಂಜೆ ಹಾಗು ಇರುಳುಗಳ ಜೊತೆಗೆ ತನ್ನ ಕೆಳದಿಯನ್ನು ಸಮೀಕರಿಸಿ ಬೇಂದ್ರೆಯವರು ಹಾಡಿದ್ದಾರೆ. ತಮ್ಮ ವೈಯಕ್ತಿಕ ಪ್ರಣಯವನ್ನು ವಿಶ್ವಪ್ರಣಯದೊಂದಿಗೆ ಸಮೀಕರಿಸಿ ಅವರು ಹಾಡಿದ ಮತ್ತೊಂದು ಕವನವೆಂದರೆ ‘ದೀಪ’. ಈ ಕವನವು ‘ನಾದಲೀಲೆ’ ಸಂಕಲನದಲ್ಲಿದೆ. ಈ ಕವನದ ಪೂರ್ತಿಪಾಠ ಹೀಗಿದೆ:


ಬಂತಿದೊ ಶೃಂಗಾರಮಾಸ
ಕಂತು ನಕ್ಕ ಚಂದ್ರಹಾಸ
ಎಂತು ತುಂಬಿತಾsಕಾಶ
ಕಂಡವರನು ಹರಸಲು.


ಕಿರಿಬೆರಳಲಿ ಬೆಳ್ಳಿಹರಳು
ಕರಿಕುರುಳೊಳು ಚಿಕ್ಕೆ ಅರಳು
ತೆರಳಿದಳಿದೊ ತರಳೆ ಇರುಳು
ತನ್ನರಸನನರಸಲು.


ಗಂಗೆ ಯಮುನೆ ಕೂಡಿ ಹರಿದು
ಸಂಗಮ ಜಲ ಬಿಳಿದು ಕರಿದು
ತಿಂಗಳ ನಗೆ ಮೇರೆವರಿದು
ಬೇರೆ ಮಿರುಗು ನೀರಿಗು.


ಪಂಥದಿಂದ ಮನೆಯ ತೊರೆದು
ಪಾಂಥ ನೆನೆದನತ್ತು ಕರೆದು :
ಇಂಥ ಸಮಯ ಬೇರೆ ಬರದು
ದಂಪತಿಗಳಿಗಾರಿಗು !


ನಾನು ನೀನು ಜೊತೆಗೆಬಂದು
ಈ ನದಿಗಳ ತಡಿಗೆ ನಿಂದು
ಸಾನುರಾಗದಿಂದ ಇಂದು
ದೀಪ ತೇಲಿಬಿಟ್ಟೆವೇ—
ದೀಪ ತೇಲಿ ಬಿಟ್ಟೆವು.


ಬ್ರಾಹ್ಮೀ ಮುಹೂರ್ತದಲ್ಲಿ ನದಿಯಲ್ಲಿ ದೀಪಗಳನ್ನು ತೇಲಿ ಬಿಡುವದು ಧಾರಿäಕ ವಿಧಿಯ ಒಂದು ಭಾಗವಾಗಿದೆ. ಬೇಂದ್ರೆಯವರು ತಮ್ಮ ಹೆಂಡತಿಯೊಡನೆ ಪ್ರಯಾಗಕ್ಕೆ ಹೋದಾಗ ಅಲ್ಲಿ ಗಂಗಾ ಹಾಗು ಯಮುನಾ ನದಿಗಳ ಸಂಗಮದಲ್ಲಿ ದೀಪವನ್ನು ತೇಲಿ ಬಿಡುತ್ತಾರೆ. ಇದು ಈ ಕವನದ ಸಂದರã. ಗಂಡ,ಹೆಂಡತಿಯರು ಜೊತೆಯಾಗಿ ಯಾವುದೇ ಕಾರåವನ್ನು ಮಾಡಲಿ, ಆ ಸಂದರãವು ಅವರಿಗೆ ಸಹಜವಾಗಿಯೇ ಪ್ರೇಮಭಾವದ ಉದ್ದೀಪನದ ಕಾರಣವೂ ಆಗಬಲ್ಲದು. ಇನ್ನೂ ನಸುಗತ್ತಲೆ ಇರುವ ಸಮಯದಲ್ಲಿ ಬೇಂದ್ರೆ ದಂಪತಿಗಳು ಒಂದು ಧಾರಿäಕ ವಿಧಿಯನ್ನು ನೆರವೇರಿಸಲು ಜೊತೆಯಾಗಿ ನದಿಯ ದಂಡೆಗೆ ಬಂದಿದ್ದಾರೆ. ಬೆಳದಿಂಗಳು ಇನ್ನೂ ತನ್ನ ಪೂರÚ ಪ್ರಭೆಯಲ್ಲಿದೆ. ನದಿಯಲ್ಲಿ ತೇಲುತ್ತಿರುವ ದೀಪಗಳು ಭಾವೋದ್ದೀಪನವನ್ನು ಮಾಡುತ್ತಿವೆ. ಹೀಗಾಗಿ ಜೊತೆಯಾಗಿರುವ ದಂಪತಿಗಳಿಗೆ ಇದು ಶೃಂಗಾರಮಾಸದಂತೆ ಭಾಸವಾದರೆ ಆಶÑರåವಿಲ್ಲ. ಕವಿಯಲ್ಲಿ ಮೂಡಿದ ಆ ಭಾವನೆಯ ಫಲವೇ ಈ ಕವನ : ಶೃಂಗಾರ ಮಾಸ’. ಆದರೆ ಬೇಂದ್ರೆಯವರು ‘ಶೃಂಗಾರಮಾಸ’ವನ್ನು ಕೇವಲ ರೂಪಕವಾಗಿ ಬಳಸುತ್ತಿಲ್ಲ. ಋತುಮಾನವನ್ನು ಸೂಚಿಸಲೂ ಸಹ ಅವರು ಈ ಪದವನ್ನು ಪ್ರಯೋಗಿಸಿದ್ದಾರೆ. ‘ಶೃಂಗಾರಮಾಸ’ ಎಂದರೆ ಚೈತ್ರಮಾಸ. ವಸಂತ ಋತುವಿನ ಮೊದಲ ಮಾಸವಾದ ಚೈತ್ರದಲ್ಲಿಯೇ, ನಿಸರÎವು ತನ್ನನ್ನು ಹೂವುಗಳಿಂದ ಸಿಂಗರಿಸಿಕೊಳ್ಳುವದು ಹಾಗು ಫಲವತಿಯಾಗಲು ಕಾಯುವದು.
(ಬೇಂದ್ರೆಯವರ ಮತ್ತೊಂದು ಕವನವಾದ ‘ಯುಗಾದಿ’ಯಲ್ಲಿಯೂ ಸಹ ಇದೇ ಧ್ವನಿಯಿದೆ :
“ಕಮ್ಮನೆ ಬಾಣಕ್ಕೆ ಸೋತು
ಜುಮ್ಮನೆ ಮಾಮರವು ಹೂತು
ಕಾಮಗಾಗಿ ಕಾದಿದೆ.”)
ಆದುದರಿಂದ ಶೃಂಗಾರಮಾಸವೆಂದರೆ ಚೈತ್ರಮಾಸದ ಕಾಲ. ಮುಂದಿನ ಸಾಲುಗಳಲ್ಲಿ ಬೇಂದ್ರೆಯವರು ಇನ್ನೂ ನಿರಿÝಷ್ಟವಾದ ಕಾಲಸೂಚನೆಗಳನ್ನು ನೀಡುತ್ತಾರೆ. ಮೊದಲ ನುಡಿಯನ್ನು ಎಳೆಎಳೆಯಾಗಿ ಪರೀಕ್ಷಿಸಿದಾಗ ಈ ಸೂಚನೆಗಳು ಹೊಳೆಯುವವು:
ಬಂತಿದೊ ಶೃಂಗಾರಮಾಸ
ಕಂತು ನಕ್ಕ ಚಂದ್ರಹಾಸ
ಎಂತು ತುಂಬಿತಾsಕಾಶ
ಕಂಡವರನು ಹರಸಲು.


ಕಂತುವದು ಎಂದರೆ ಮುಳುಗುವದು. ‘ಕಂತು ನಕ್ಕ ಚಂದ್ರಹಾಸ’ ಎಂದರೆ, ಮುಳುಗುತ್ತಿರುವ ಚಂದ್ರ. ಬೆಳದಿಂಗಳು ಆಕಾಶವನ್ನೆಲ್ಲ ತುಂಬಿಕೊಂಡಾಗ, ಚಂದ್ರನು ಮುಳುಗುತ್ತಿದ್ದಾನೆ ಎಂದರೆ ಇದು ಹುಣ್ಣಿವೆಯ ದಿನ ಹಾಗೂ ಈ ಸಮಯವು ಸೂರೋåದಯಕ್ಕಿಂತ ಮೊದಲಿನ ಸಮಯ. ಆದುದರಿಂದ ಬೇಂದ್ರೆಯವರು ಚೈತ್ರಪೂರಿÚಮೆಯಂದು ಇರುಳಿನ ಕೊನೆಯ ಜಾವದಲ್ಲಿ ದೀಪಗಳನ್ನು ತೇಲಿಬಿಡಲು ಅಲ್ಲಿ ತೆರಳಿದ್ದರು ಎಂದು ಸೂಚಿಸುತ್ತಿದ್ದಾರೆ. ಇದು ಪೂರಿÚಮೆಯ ದಿನವಾದದ್ದರಿಂದಲೇ ಆಕಾಶವೆಲ್ಲ ಬೆಳದಿಂಗಳಿನಿಂದ ತುಂಬಿದೆ. ಅದನ್ನೇ ಬೇಂದ್ರೆಯವರು ‘ಎಂತು ತುಂಬಿತಾsಕಾಶ’ ಎಂದು ಹಾಡಿದ್ದಾರೆ. ಶೃಂಗಾರಮಾಸದ ವರÚನೆಯನ್ನು ಪರಿಪೂರÚಗೊಳಿಸುತ್ತಲೇ, ಬೇಂದ್ರೆಯವರು ಕಾಲವನ್ನು ಸೂಚಿಸುವ ಪರಿ ಇದು.


‘ಕಂತು’ ಪದಕ್ಕೆ ಕಾಮದೇವ ಎನ್ನುವ ಅರÜವೂ ಇದೆ. ಹೀಗಾಗಿ ‘ಕಂತು ನಕ್ಕ ಚಂದ್ರಹಾಸ’ ಎಂದರೆ ಕಾಮದೇವನ ನಗೆಯೇ ಬೆಳದಿಂಗಳಾಯಿತು ಎನ್ನುವ ಭಾವನೆಯೂ ಇಲ್ಲಿ ಬರುತ್ತದೆ. ಪ್ರಣಯಭಾವನೆಯನ್ನು ಜಾಗೃತಗೊಳಿಸುವ ಈ ಕಾಮದೇವನ ಉದ್ದೇಶವೇನು? ಈತನು ಕೇವಲ ಸಾಧಾರಣ ಕಾಮನಲ್ಲ ; ಈತನು ದೇವನು ಎನ್ನುವದನ್ನು ಗಮನದಲ್ಲಿ ಇಟ್ಟುಕೊಳ್ಳಿ. (ಬೇಂದ್ರೆಯವರು ತಮ್ಮ ಮತ್ತೊಂದು ಕವನದಲ್ಲಿ ’ದೇವಕಾಮವೆ ಕಾಮದೇವನಾಗಿ’ ಎಂದು ಹೇಳಿದ್ದಾರೆ.) ದೇವತೆಯಲ್ಲಿ ಸದಾಕಾಲವೂ ಅನುಗ್ರಹ ಭಾವನೆಯು ತುಂಬಿರುತ್ತದೆ. ಅದರಂತೆ ಕಾಮದೇವನೂ ಸಹ ತನ್ನ ಚಂದ್ರಹಾಸದಿಂದ ಅಂದರೆ ಬೆಳದಿಂಗಳಿನಿಂದ ಆಕಾಶವನ್ನೆಲ್ಲ ತುಂಬುವದು ಅನುಗ್ರಹ ನೀಡುವ ಕಾರಣಕ್ಕಾಗಿ. ಈ ಅನುಗ್ರಹವು ಕೇವಲ ಪ್ರಣಯಿಗಳಿಗಾಗಿ ಮಾತ್ರ ಅಲ್ಲ, ‘ಕಂಡವರನು ಹರಸಲು’. ಇದರ ಅರÜ ಕಣ್ಣಿಗೆ ಬಿದ್ದ ಕೆಲವರನ್ನು ಮಾತ್ರ ಹರಸುವದು ಎಂದಲ್ಲ. ಆಕಾಶವನ್ನೆಲ್ಲ ಬೆಳದಿಂಗಳ ರೂಪದ ನಗೆಯಿಂದ ವ್ಯಾಪಿಸಿದ ಆ ಕಾಮದೇವನಿಗೆ ಕೆಳಗಿರುವ ಸೃಷ್ಟಿಯೆಲ್ಲ ಕಾಣದಿದ್ದೀತೆ? ಆದುದರಿಂದ ಸಕಲ ಚರಾಚರ ಜಗತ್ತನ್ನೆಲ್ಲ ಹರಸಲು ಕಾಮದೇವನು ಕಾತರನಾಗಿದ್ದಾನೆ ಎನ್ನುವದು ಈ ಸಾಲುಗಳ ಮರä.


ಮೊದಲನೆಯ ನುಡಿಯಲ್ಲಿ ಪ್ರಕೃತಿಯಲ್ಲಿ ಹರಡಿದ ಪ್ರಣಯ ಭಾವನೆಯನ್ನು ತೋರಿಸುತ್ತಲೇ ಎರಡನೆಯ ನುಡಿಯಲ್ಲಿ ಬೇಂದ್ರೆಯವರು ಈ ವಿಶ್ವಪ್ರಣಯದ ನಾಯಕ, ನಾಯಕಿಯರನ್ನು ತೋರಿಸುತ್ತಿದ್ದಾರೆ. ಜೊತೆಜೊತೆಗೇ ಕಾಲಸೂಚನೆಯನ್ನೂ ಮಂಡಿಸುತ್ತಿದ್ದಾರೆ :
ಕಿರಿಬೆರಳಲಿ ಬೆಳ್ಳಿಹರಳು
ಕರಿಕುರುಳೊಳು ಚಿಕ್ಕೆ ಅರಳು
ತೆರಳಿದಳಿದೊ ತರಳೆ ಇರುಳು
ತನ್ನರಸನನರಸಲು.
ಇರುಳು ಎಂಬ ಚಿಕ್ಕ ವಯಸ್ಸಿನ ಯುವತಿ (=ತರಳೆ) ತನ್ನ ಅರಸನನ್ನು ಅರಸಲು ಅಂದರೆ ಹುಡುಕಲು ಹೊರಟಿದ್ದಾಳೆ ಎನ್ನುವದು ಈ ನುಡಿಯ ತಿರುಳು. ರಾತ್ರಿ ಎನ್ನುವ ಈ ಯುವತಿ ಅನಾದಿಕಾಲದಿಂದಲೂ ತನ್ನ ಅರಸನನ್ನು ಅರಸುತ್ತಳೇ ಇದ್ದಾಳೆ. ಹೀಗಾಗಿ ಇವಳು ಚಿರಯೌವನೆ. ಆದುದರಿಂದಲೇ ಇವಳು ‘ತರಳೆ’. ಈ ತರಳೆಯ ಅರಸ ಯಾರು? ರಾತ್ರಿಕುಮಾರಿಯ ಅರಸನು ಚಂದ್ರನೇ ತಾನೆ? ಆದುದರಿಂದ ಚಂದ್ರನೇ ಇವಳು ಅರಸುತ್ತಿರುವ ಪ್ರಣಯಿ. ಚಂದ್ರ ಎಲ್ಲಿದ್ದಾನೆ? ಆತನು ಕಂತು (=ಮುಳುಗು)ತ್ತಿದ್ದಾನೆ ಎಂದು ಬೇಂದ್ರೆಯವರು ಮೊದಲನೆಯ ನುಡಿಯಲ್ಲಿಯೇ ಹೇಳಿದ್ದಾರೆ. ಮುಳುಗುತ್ತಿರುವ ಚಂದ್ರನ ಹಿಂದೆಯೇ ಇರುಳೂ ಕೂಡ ಸರಿಯುತ್ತಿದೆ. ಈ ರಾತ್ರಿಕುವರಿಯ ಒಡವೆಗಳನ್ನಷ್ಟು ನೋಡಿರಿ. ಇವಳು ಕಿರಿಬೆರಳಿನಲ್ಲಿ ಬೆಳ್ಳಿಹರಳಿರುವ ಉಂಗುರವನ್ನು ಹಾಗು ಕಪ್ಪು ಕುರುಳಿನಲ್ಲಿ ಚಿಕ್ಕೆಗಳ ಅರಳು ಎಂದರೆ ಹೂವುಗಳನ್ನು ಧರಿಸಿದ್ದಾಳೆ. ಬೆಳ್ಳಿಹರಳು ಎಂದರೆ ಶುಕ್ರಗ್ರಹ. ಶುಕ್ರಗ್ರಹಕ್ಕೆ ಕನ್ನಡದಲ್ಲಿ ‘ಬೆಳ್ಳಿ ಚಿಕ್ಕಿ’ ಎಂದೇ ಕರೆಯುತ್ತಾರೆ. ಇವಳ ಕಪ್ಪು ಕುರುಳು ಎಂದರೆ ಆಕಾಶ. ಆಕಾಶದ ಅರಳುಗಳು ಎಂದರೆ ನಕ್ಷತ್ರಗಳು. ಇಷ್ಟು ಶೃಂಗಾರದೊಡನೆ ರಾತ್ರಿಕುಮಾರಿ ಚಂದ್ರನ ಬೆನ್ನು ಹತ್ತಿ ನಡೆದಿದ್ದಾಳೆ. ಇದಿಷ್ಟು ವಿಶ್ವಪ್ರಣಯಿಗಳ ವರÚನೆಯಾದರೆ, ಇದರಲ್ಲಿ ಅಡಗಿರುವ ಕಾಲಸೂಚನೆಯನ್ನಷ್ಟು ನೋಡೋಣ :


ಶುಕ್ರಗ್ರಹವು ಸೂರೋåದಯಕ್ಕಿಂತ ಮೊದಲು ಅಥವಾ ಸೂರಾåಸ್ತದ ನಂತರ ಕಾಣಿಸುತ್ತದೆ.
ಈ ಸಂದರãದಲ್ಲಿ ಇದು ಸೂರೋåದಯದ ಮೊದಲಿನ ವರÚನೆ. ಇದನ್ನು ದೃಢೀಕರಿಸಲು ಬೇಂದ್ರೆಯವರು ‘ಕಿರಿಬೆರಳಲಿ ಬೆಳ್ಳಿಹರಳು’ ಎಂದು ಹೇಳುತ್ತಾರೆ. ರಾತ್ರಿಕುವರಿಯು ತನ್ನ ಯಾವುದೇ ನಾಲ್ಕು ಬೆರಳುಗಳಲ್ಲಿ ಉಂಗುರ ಧರಿಸಬಹುದಾಗಿತ್ತು. ಆದರೆ ಅವಳು ತನ್ನ ಕಿರಿಬೆರಳಲ್ಲಿ ಧರಿಸಿದ್ದಾಳೆ. ಈಗ ತೋರುಬೆರಳಿನಿಂದ ಬೆರಳುಗಳನ್ನು ಎಣಿಸಿರಿ : (೧) ತೋರುಬೆರಳು, (೨) ನಡುವಿನ ಬೆರಳು, (೩) ಉಂಗುರ ಬೆರಳು ಹಾಗು (೪) ಕಿರಿಬೆರಳು. ಈ ಎಣಿಕೆಯಲ್ಲಿ ಕಿರಿಬೆರಳು ನಾಲ್ಕನೆಯ ಬೆರಳಾಗುತ್ತದೆ. ಆದುದರಿಂದ ಈ ಸಮಯವು ರಾತ್ರಿಯ ನಾಲ್ಕನೆಯ ಜಾಮ. ಆದರೆ ನಕ್ಷತ್ರಗಳು ಇನ್ನೂ ಕಾಣುತ್ತಲೇ ಇವೆ. ಆದುದರಿಂದ ಇದು ನಾಲ್ಕನೆಯ ಜಾಮದ ಪೂರಾéರÞ ಅರಾÜತ್ ಬ್ರಾಹ್ಮೀ ಮುಹೂರÛ.


ಮೂರನೆಯ ನುಡಿಯಲ್ಲಿ ಬೇಂದ್ರೆಯವರು ಆಕಾಶದಿಂದ ಭೂಮಿಗೆ ಇಳಿಯುತ್ತಾರೆ ಹಾಗು ಭೂಮಿಯ ಮೇಲಿನ ಪ್ರಣಯವನ್ನು ಅಂದರೆ ಗಂಗಾ-ಯಮುನಾ ನದಿಗಳ ಸಂಗಮವನ್ನು ವರಿÚಸುತ್ತಾರೆ :
ಗಂಗೆ ಯಮುನೆ ಕೂಡಿ ಹರಿದು
ಸಂಗಮ ಜಲ ಬಿಳಿದು ಕರಿದು
ತಿಂಗಳ ನಗೆ ಮೇರೆವರಿದು
ಬೇರೆ ಮಿರುಗು ನೀರಿಗು.


ಗಂಗೆಯ ನೀರಿನ ಬಣ್ಣ ಬಿಳಿ ಹಾಗು ಯಮುನೆಯ ನೀರಿನ ಬಣ್ಣ ಕರಿ. ಈ ನದಿಗಳ ಸಂಗಮದ ಜಲವು ಬಿಳಿ ಹಾಗು ಕರಿಯ ಬಣ್ಣಗಳ ಮಿಶ್ರಣವಾಗುತ್ತದೆ. ಈ ಮಿಶ್ರಣದ ಮೇಲೆ ತಿಂಗಳಿನ ನಗೆ ಅಂದರೆ ಬೆಳದಿಂಗಳು ಬಿದ್ದಾಗ ಆ ನೀರಿಗೆ ಒಂದು ವಿಭಿನ್ನ ಮಿರುಗು ಬರುತ್ತದೆ. ದಾಂಪತ್ಯದಲ್ಲೂ ಸಹ ಗಂಡ ಹಾಗು ಹೆಂಡತಿಯ ಸ್ವಭಾವಗಳು ಭಿನ್ನವಾಗಿರುತ್ತವೆ. ಆದರೆ ಸರಸ ಪ್ರೇಮದ ಬೆಳದಿಂಗಳಿನಲ್ಲಿ ಮಿಂದಾಗ ಆ ದಾಂಪತ್ಯಕ್ಕೆ ಒಂದು ಹೊಸ ಸೊಬಗು ಬರುತ್ತದೆ ಎಂದು ಬೇಂದ್ರೆಯವರು ಅನ್ಯೋಕ್ತಿಯ ಮೂಲಕ ಹೇಳುತ್ತಿದ್ದಾರೆ.


ನಾಲ್ಕನೆಯ ನುಡಿ ಹೀಗಿದೆ :
ಪಂಥದಿಂದ ಮನೆಯ ತೊರೆದು
ಪಾಂಥ ನೆನೆದನತ್ತು ಕರೆದು :
ಇಂಥ ಸಮಯ ಬೇರೆ ಬರದು
ದಂಪತಿಗಳಿಗಾರಿಗು !


ಮೇಲಿನ ಮೂರು ನುಡಿಗಳಲ್ಲಿ ಬೇಂದ್ರೆಯವರು ಆಕಾಶದಲ್ಲಿಯ ಪ್ರಣಯವನ್ನು ಹಾಗು ಭೂಮಿಯ ಮೇಲಿನ ಪ್ರಣಯವನ್ನು ಬಣ್ಣಿಸಿದರು. ಆದರೆ ತಮ್ಮದೇ ಸಂಸಾರದಲ್ಲಿ ಅವರು ಒಂದು ಮನಸ್ತಾಪವನ್ನು ಅನುಭವಿಸುತ್ತಿದ್ದಾರೆ. ಇದರ ಸುಳಿವು ಈ ನಾಲ್ಕನೆಯ ನುಡಿಯಲ್ಲಿದೆ.


ಪಂಥ ಎಂದರೆ ಜಿದ್ದು , ಹಟ. ಪಾಂಥ ಎಂದರೆ ದಾರಿಕಾರ, ಪ್ರಯಾಣಿಕ. ಯಾವ ಕಾರಣಕ್ಕಾಗಿ ಬೇಂದ್ರೆ ದಂಪತಿಗಳಲ್ಲಿ ವಿರಸ ಹುಟ್ಟಿತು ಎನ್ನುವದನ್ನು ಬೇಂದ್ರೆಯವರು ತಿಳಿಸಿಲ್ಲ. ಒಟ್ಟಿನಲ್ಲಿ ಹಟಮಾರಿತನ, ಸಿಟ್ಟು, ಸೆಡವು ಇವೆಲ್ಲ ಭಾವನೆಗಳು ಇಬ್ಬರಲ್ಲೂ ಬಂದು ಹೋಗಿವೆ. ಇಬ್ಬರಿಗೂ ದುಃಖವಾಗಿದೆ ಎನ್ನುವದು ‘ಅತ್ತು ಕರೆದು’ ಎನ್ನುವದರ ಮೂಲಕ ಸ್ಪಷ್ಟವಾಗಿದೆ. ಇಂತಹ ಸಂದರãವು ಬೇರೆ ಯಾವ ದಂಪತಿಗಳಿಗೂ ಬಂದಿರಲಿಕ್ಕಿಲ್ಲ ಹಾಗು ಬರದಿರಲಿ ಎಂದು ಬೇಂದ್ರೆಯವರು ಹಾರೈಸುತ್ತಾರೆ. ಆದರೆ ಗಂಗೆ-ಯಮುನೆಗಳ ಸಂಗಮದ ತಟದಲ್ಲಿ ಇವರೀರéರೂ ಆ ಅಸುಖೀ ಭಾವನೆಯಿಂದ ಈಗ ಹೊರಬಂದಿದ್ದಾರೆ. ವಿಶ್ವಪ್ರಣಯದ ಬೆಳದಿಂಗಳಿನಲ್ಲಿ ಮಿಂದು, ಮತ್ತೆ ಸರಸ, ಸಮಾಧಾನದ ಭಾವಕ್ಕೆ ಮರಳಿದ್ದಾರೆ. ಈ ಭಾವನೆಯು ಅವರ ಮುಂದಿನ (ಕೊನೆಯ) ನುಡಿಯಲ್ಲಿ ವ್ಯಕ್ತವಾಗುತ್ತಿದೆ :
ನಾನು ನೀನು ಜೊತೆಗೆಬಂದು
ಈ ನದಿಗಳ ತಡಿಗೆ ನಿಂದು
ಸಾನುರಾಗದಿಂದ ಇಂದು
ದೀಪ ತೇಲಿಬಿಟ್ಟೆವೇ—
ದೀಪ ತೇಲಿ ಬಿಟ್ಟೆವು.


ಸಾನುರಾಗದಿಂದ ಎಂದು ಹೇಳುವಾಗ ಅವರೀರéರಲ್ಲಿ ಮತ್ತೆ ಅನುರಾಗ ಭಾವ ಬಂದಿರುವದನ್ನು ಬೇಂದ್ರೆಯವರು ಸ್ಪಷ್ಟ ಪಡಿಸುತ್ತಾರೆ. ದೀಪ ತೇಲಿ ಬಿಡುವ ವಿಧಿಯನ್ನು ಜೊತೆಯಾಗಿ ಮಾಡುವದರ ಮೂಲಕ ದಾಂಪತ್ಯ ಜೀವನದಲ್ಲಿ ಗಂಡ-ಹೆಂಡಿರ ಸಾಮರಸ್ಯವನ್ನು ಸೂಚಿಸುತ್ತಾರೆ. ಅಲ್ಲದೆ, ಈ ದೀಪವು ಬಾಳಿಗೆ ಬೆಳಕು ನೀಡುವ ದೀಪವೂ ಹೌದು ಎಂದು ಸೂಚಿಸುತ್ತಾರೆ.


ಹೆಚ್ಚಿನ ಓದಿಗೆ: http://sallaap.blogspot.com/2010/10/blog-post.html

ಕಾಮೆಂಟ್‌ಗಳಿಲ್ಲ: